ಗ್ರಾಮೀಣ ಕರ್ನಾಟಕ ಈಗ “ಪವರ್” ಫುಲ್.. !, ಆದರೆ ಯಾರೊಬ್ಬರೂ ಈ ಬಗ್ಗೆ ಮಾತನಾಡುತ್ತಿಲ್ಲ. ಈ ಶಕ್ತಿ ಹೇಗೆ ಬಂತು ಅಂತ ಗ್ರಾಮೀಣ ಜನ ಮಾತನಾಡುತ್ತಿದ್ದಾರೆ. ಅಷ್ಟಕ್ಕೂ ಗ್ರಾಮೀಣ ಕರ್ನಾಟಕ ಹೇಗೆ ಪವರ್ ಫುಲ್ ಅಂತೀರಾ. ಇಲ್ಲಿ ಈಗ ನಿರಂತರ ಪವರ್ ಇದೆ. ಹಳ್ಳಿ ಜನರಿಗೆ ಖುಷಿ ಇದೆ.
ಗ್ರಾಮೀಣ ಕರ್ನಾಟಕದಲ್ಲಿ ಒಂದು ಕಾಲವಿತ್ತು. ಬೆಳಗ್ಗೆ ಹೋದ ಪವರ್ ಬರೋದೇ ಸಂಜೆ ಇನ್ನೆಷ್ಟೊತ್ತಿಗೋ. ಶಾಲಾ ಮಕ್ಕಳಿಗೆ , ಗೃಹಿಣಿಯರಿಗೆ ತಲೆನೋವೇ ತಲೆ ನೋವು.ಆದ್ರೆ ಹೇಳೋದು ಯಾರಲ್ಲಿ. ಒಂದಷ್ಟು ಪತ್ರಿಕೆಗಳಲ್ಲಿ ವರದಿಗಳೂ , ಇನ್ನೊಂದಿಷ್ಟು ಪ್ರತಿಭಟನೆಗಳು ನಡೆದರೆ ಮುಗೀತು.ಪವರ್ ಪ್ರೋಬ್ಲೆಮ್ ಮುಗೀಲೇ ಇಲ್ಲ. ಅದಕ್ಕಿಂತಲೂ ಹೆಚ್ಚು ಕೃಷಿಕರು ಪಡೋ ಸಂಕಷ್ಠ ಒಂದಲ್ಲ ಹಲವಾರು. ತೋಟಕ್ಕೆ ನೀರುಣಿಸಲು ರಾತ್ರಿ ಹಗಲು ಶ್ರಮ ಪಡಬೇಕು. ಪವರ್ ಬಂದರೂ ಪಂಪ್ ಚಾಲೂ ಆಗೋದಿಲ್ಲ.ಆದರೂ ವಿಧಿಯಿಲ್ಲ ಕಾದು ಕುಳಿತಾದರೂ ಚಾಲೂ ಮಾಡಲೇ ಬೇಕು.ಅಲ್ಲೂ ಕಾಂಪಿಟೀಶನ್ ಇರ್ತಿತ್ತು. ಪವರ್ ಬಂದಾಗಲೇ ಪಂಪ್ ಚಾಲೂ ಆದರೆ ಮುಗೀತು . ಇಲ್ಲಾಂದ್ರೆ ವೋಲ್ಟೇಜ್ ಪ್ರಾಬ್ಲಂನಿಂದಾಗಿ ಚಾಲೂ ಆಗೋದಿಲ್ಲ. ತುಂಬಾ ವೋಲ್ಟೇಜ್ ಕಡಿಮೆ ಆದ್ರೆ ಲೈನ್ ಟ್ರಿಪ್ ಆಗುತ್ತೆ. ಮತ್ತೆ ಐದೋ ಹತ್ತೋ ನಿಮಿಷ ಕಳೆದು ಪವರ್ ಬರೋದು. ಆಗಲೂ ಇದೇ ಸಮಸ್ಯೆ. ಹೀಗೆ ಒಂದೇ ಎರಡೇ ಹತ್ತಾರು ಸಮಸ್ಯೆ ಗ್ರಾಮೀಣ ಕರ್ನಾಟಕದಲ್ಲಿ.
ಆದರೆ ಈ ಬಾರಿ ಸ್ವಲ್ಪ ಸುಧಾರಿಸಿದಂತೆ ಕಾಣುತ್ತೆ. ಯಾಕೆಂದರೆ ಅಂದೆಲ್ಲಾ ನವೆಂಬರ್ ಅಂತ್ಯ , ಡಿಸೆಂಬರ್ನಲ್ಲಿಯೇ ಪವರ್ ಕಟ್ ಶುರುವಾಗುತ್ತಿತ್ತು. ಹೀಗಾಗಿ ಮಾರ್ಚ್ ವೇಳೆಗೆ ಪರಿಸ್ಥಿತಿ ತೀರಾ ಕಠಿಣವಾಗುತ್ತಿತ್ತು.ಆದರೆ ಈ ಬಾರಿ ಹಾಗೆ ಕಾಣುತ್ತಿಲ್ಲ. ಫೆಬ್ರವರಿ ಆರಂಭವಾದರೂ ದಿನ ಪೂರ್ತಿ ಪವರ್ ಇದೆ. ಅದರಲ್ಲಿ 12 ಗಂಟೆ ಕೃಷಿಕರಿಗಾಗಿ ತ್ರೀ ಫೇಸ್ ಇದೆ. ಉಳಿದಂತೆ 12 ಗಂಟೆ ಮನೆ ಬಳಕೆಗೆ ಪವರ್ ಇದೆ. ಹೀಗಾಗಿ ನಿರಂತರ 24 ಗಂಟೆ ಮನೆಗೆ ಪವರ್ ಇದ್ದೇ ಇದೆ. ಆದರೆ ಇದು ಎಷ್ಟು ದಿನ ಅಂತ ಗೊತ್ತಿಲ್ಲ. ಒಂದಂತೂ ಸತ್ಯ ಇಷ್ಟು ದಿನ ಪವರ್ ನೀಡಿದ್ದಾರಲ್ಲಾ ಮುಂದಿನ ಬಾರಿ ಇನ್ನೂ ಸರಿಯಾಗಬಹುದು ಅನ್ನೋ ಆಶಾವಾದ ಗ್ರಾಮೀಣರಲ್ಲಿದೆ.ಅಂತೂ ಯಾವುದೇ ತೊಂದರೆ ಇಲ್ಲದೆ ಈಗ , ಇದುವರೆಗೆ ಪವರ್ ನೀಡಿದ್ದಾರಲ್ಲಾ ಅಂತ ಕೃಷಿಕರೆಲ್ಲಾ ಈಗ ನೆನಪಿಸಿಕೊಳ್ಳುತ್ತಾರೆ. ಅದರಲ್ಲೂ ಉಚಿತ ವಿದ್ಯುತ್ ಕೂಡಾ ಕೊಟ್ಟಿದ್ದಾರಲ್ಲಾ ಅದು ಇನ್ನಷ್ಡು ಖುಷಿ. ಆವತ್ತು ಮಾತನಾಡಿಕೊಳ್ಳುತ್ತಿದ್ದರು , ಹೇಗೂ ಫ್ರೀ ಕರೆಂಟ್ ಅಲ್ವಾ ಬರುವ ವರ್ಷದಿಂದ ಪವರೇ ಇರಲಿಕ್ಕಿಲ್ಲ ಅಂತ ಮಾತನಾಡಿಕೊಳ್ಳುತ್ತಿದ್ದರು. ಆದರೆ ಈಗ ಆ ನಿಲುವಿನಿಂದ ಬದಲಾಗಿದ್ದಾರೆ ಗ್ರಾಮೀಣ ಜನ. ಹೀಗೇ ಮುಂದುವರಿಯಲಿ ಅನ್ನೋದೇ ಕೃಷಿಕರ ಒತ್ತಾಸೆ.
Feb 28: BMS calls for Industrial Strike
-
New Delhi: Sri B.N,Rai General Secretary, BMS appealed to all the
workers to observe industrial strike on 28th February, 2012 peacefully,
to express th...
1 ಗಂಟೆ ಹಿಂದೆ


